Friday 26th, April 2024
canara news

ಬಂಟ್ವಾಳ ಹರೀಶ್ ಹತ್ಯೆಯ ಪ್ರಮುಖ ಆರೋಪಿ ಬಂಧನ: ಎಸ್ಪಿ ಶರಣಪ್ಪ

Published On : 30 Nov 2015   |  Reported By : Canaranews Network


ಮಂಗಳೂರು:ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಶರಣಪ್ಪ ಹೇಳಿದ್ದಾರೆ.ಮಂಗಳೂರಿನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗೋಳ್ತಮಜಲು ನಿವಾಸಿ ನಾರಾಯಣ ಪೂಜಾರಿ ಎಂಬವರ ಪುತ್ರ ಮಿಥುನ್(27) ನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.ಹರೀಶ್ ಹತ್ಯೆ ಸಂಬಂಧ ಅಪರಿಚಿತ ದುಷ್ಕರ್ಮಿಗಳ ತಂಡವನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದು, ಸೋಮವಾರ ಬೆಳಗ್ಗೆ 6:30ರ ವೇಳೆಗೆ ಪುತ್ತೂರಿನ ಬಸ್ ನಿಲ್ದಾಣದ ಬಳಿಯಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಮಿಥುನ್ ರೌಡಿ ಶೀಟರ್
ಹರೀಶ್ ಹತ್ಯೆಯ ಪ್ರಮುಖ ಆರೋಪಿ ಮಿಥುನ್ ರೌಡಿ ಶೀಟರ್ ಆಗಿದ್ದು, ಈಗಾಗಲೇ ಈತನ ಮೇಲೆ 1 ಕೊಲೆ ಪ್ರಕರಣ, 3 ಕೊಲೆಯತ್ನ ಪ್ರಕರಣ ,ಇತರ 8 ಪ್ರಕರಣಗಳು ಹಾಗೂ ವಿಟ್ಲ ಠಾಣೆಯಲ್ಲೂ 1 ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಶರಣಪ್ಪ ಮಾಹಿತಿ ನೀಡಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಲಾದ ಮಾರುತಿ ಓಮ್ನಿಯನ್ನು ವಶಪಡಿಸಿಕೊಳ್ಳಬೇಕಿದೆ. ಅಲ್ಲದೇ ಪ್ರಕರಣದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಬಲೆ ಬೀಸಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದವರು ಹೇಳಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here