Thursday 25th, April 2024
canara news

ಶಿಸ್ತು ಉಲ್ಲಂಘಿಸಿಲ್ಲ, ಕಾರ್ಯಕರ್ತರ ಭಾವನೆಗಳಿಗೆ ಸ್ಪಂದನೆ: ಜಯಪ್ರಕಾಶ್‌ ಹೆಗ್ಡೆ

Published On : 09 Dec 2015   |  Reported By : Canaranews Network


ಮಂಗಳೂರು: ನಾನು ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ. ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜಯಪ್ರಕಾಶ್‌ ಹೆಗ್ಡೆ ಹೇಳಿದ್ದಾರೆ. ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನು ನಿಲ್ಲುವುದಿಲ್ಲ ಎಂದು ಹೇಳಿದ್ದರೂ ಈ ಬಗ್ಗೆ ಪಂಚಾಯತ್‌ ಸದಸ್ಯರಿಗೆ ಪತ್ರ ಬರೆದಿದ್ದರೂ ಮತ್ತೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನನ್ನ ವಿರೋಧವಿದೆ.

ಪಕ್ಷದಲ್ಲಿ ಸಕ್ರಿಯವಾಗಿರುವವರಿಗೆ, ಜನಧಿಸಂಪರ್ಕ ಇರುವ ಯಾರಿಗೆ ಬೇಕಾದರೂ ಅವಕಾಶ ನೀಡಲಿ. ಅವರನ್ನು ನಾನು ಬೆಂಬಲಿಸುತ್ತೇನೆ. ನಾನು ಪಕ್ಷ ಬಿಟ್ಟಿಲ್ಲ. ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂಬುದು ನನ್ನ ನಿಲುವು. ಇಂದು ನನ್ನ ಜತೆಗೆ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಭುಜಂಗ ಶೆಟ್ಟಿ ಅವರು ಕೂಡ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಕೋಟ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಂಕರ ಕುಂದರ್‌ ಡಿ. 9ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯಾದ ಬಳಿಕವೂ ಬಿ ಫಾರ್ಮ್ ಬದಲಾವಣೆ ಮಾಡಿದ ನಿದರ್ಶನಗಳಿವೆ ಎಂದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here