ಮಂಗಳೂರು: ನಾನು ಪಕ್ಷದ ಶಿಸ್ತು ಉಲ್ಲಂಘಿಸಿಲ್ಲ. ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನು ನಿಲ್ಲುವುದಿಲ್ಲ ಎಂದು ಹೇಳಿದ್ದರೂ ಈ ಬಗ್ಗೆ ಪಂಚಾಯತ್ ಸದಸ್ಯರಿಗೆ ಪತ್ರ ಬರೆದಿದ್ದರೂ ಮತ್ತೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನನ್ನ ವಿರೋಧವಿದೆ.
ಪಕ್ಷದಲ್ಲಿ ಸಕ್ರಿಯವಾಗಿರುವವರಿಗೆ, ಜನಧಿಸಂಪರ್ಕ ಇರುವ ಯಾರಿಗೆ ಬೇಕಾದರೂ ಅವಕಾಶ ನೀಡಲಿ. ಅವರನ್ನು ನಾನು ಬೆಂಬಲಿಸುತ್ತೇನೆ. ನಾನು ಪಕ್ಷ ಬಿಟ್ಟಿಲ್ಲ. ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಎಂಬುದು ನನ್ನ ನಿಲುವು. ಇಂದು ನನ್ನ ಜತೆಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭುಜಂಗ ಶೆಟ್ಟಿ ಅವರು ಕೂಡ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್ ಡಿ. 9ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯಾದ ಬಳಿಕವೂ ಬಿ ಫಾರ್ಮ್ ಬದಲಾವಣೆ ಮಾಡಿದ ನಿದರ್ಶನಗಳಿವೆ ಎಂದರು.