Friday 26th, April 2024
canara news

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹರಿಕೃಷ್ಣ ಬಂಟ್ವಾಳ್ ನಾಮಪತ್ರ ಸಲ್ಲಿಕೆ

Published On : 10 Dec 2015   |  Reported By : Canaranews Network


ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹರಿಕೃಷ್ಣ ಬಂಟ್ವಾಳ್ ಬುಧವಾರ ತಮ್ಮ ಬೆಂಬಲಿಗರೊಂದಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಅಧಿಕಾರಕ್ಕಾಗಿ ನಾಮಪತ್ರ ಸಲ್ಲಿಸಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾನು ನಾಮಪತ್ರ ಸಲ್ಲಿಸಿದ್ದೇನೆ. ಯಾವುದೇ ಕಾರಣಕ್ಕೆ ನಾನು ನಾಮಪತ್ರವನ್ನು ಹಿಂಪಡೆಯುವುದಿಲ್ಲ. ನಾನು ಹಣದ ಧೈರ್ಯದಲ್ಲಿ ನಾಮಪತ್ರ ಸಲ್ಲಿಸಿಲ್ಲ.

ನನ್ನ ಹಿಂದೆ ನಿಷ್ಠಾವಂತ ಪ್ರಾಮಾಣಿಕ ಕಾರ್ಯಕರ್ತರ ದಂಡೇ ಇದೆ. ನಾನು ಅವರ ಪ್ರತಿನಿಧಿಯಾಗಿ ಚುನಾವಣೆಗೆ ನಿಂತಿದ್ದೇನೆ ಎಂದು ಹೇಳಿದರು.ಕಾಂಗ್ರೆಸ್ ಮಾತ್ರವಲ್ಲದೇ ಎಲ್ಲಾ ಪಕ್ಷಗಳಲ್ಲೂ ನಿಷ್ಠಾವಂತ ಕಾರ್ಯಕರ್ತರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಈ ರೀತಿಯ ಅನ್ಯಾಯ ನಡೆಯಬಾರದು. ನಾನು ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕಿಯಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here