ಮಂಗಳೂರು: ಎತ್ತಿನಹೊಳೆ ಯೋಜನೆ ಪರವಾಗಿ ನಾವು ೯ ವರ್ಷಗಳ ಹಿಂದೆಯೇ ಮಾತನಾಡಿದ್ದೇವೆ. ಈಗ ನಳಿನ್ ಕುಮಾರ್ ಕಟೀಲ್ ಯೋಜನೆ ವಿರೋಧಿಸುತ್ತಿದ್ದಾರೆ. ಆದರೆ, ಈ ಯೋಜನೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಶಾಸಕ ಅಂಗಾರ ಏಕೆ ಮೌನವಾಗಿದ್ದಾರೆ.
ಇದೆಲ್ಲ ಕೇವಲ ಓಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾಗಿದೆ. ಆದರೆ, ಆ ಬಳಿಕ ನಡೆದ ಚುನಾವಣೆಯಲ್ಲಿ ಗೆಲುವು ದೊರೆತಿದೆ. ಈಗಾಗಲೇ ನಾವು ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ್ದು, ಇನ್ನು ಬರುವ ತಾ.ಪಂ., ಜಿ.ಪಂ. ಚುನಾವಣೆಯಲ್ಲೂ ನಮಗೆ ಗೆಲುವು ಖಚಿತ ಎಂದು ಹೇಳಿದರು.