ಸಾಮಾಜಿಕ ಅಭಿವೃದ್ಧಿ ಕಾರ್ಯಗಳಲ್ಲಿ ನಿಸ್ವಾರ್ಥದಿಂದ ತನ್ನನ್ನು ತೊಡಗಿಸಿಕೊಂಡ ಮುಂಬೈಯ ಹಿರಿಯ ಉದ್ಯಮಿ ಸುರೇಶ್ ಡಿ. ಪಡುಕೋಣೆಯವರಿಗೆ ಕುಂದಪ್ರಭ ಸಂಸ್ಥೆ ಸಾಧಕರಿಗೆ ನೀಡುವ ಕೋ.ಮ.ಕಾರಂತ ಪ್ರಶಸ್ತಿಯನ್ನು ತಾ.24 ರಂದು ಪ್ರದಾನ ಮಾಡಲಾಯಿತು.
ಕುಂದಾಪುರ ಸರಕಾರಿ ಪ.ಪೂ.ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಮಾಜಿ ಶಾಸಕ ಎ.ಜಿ.ಕೊಡ್ಗಿ ಸಮಾರಂಭವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ, ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾದ್ಯಾಯ ಭಾಗವಹಿಸಿದ್ದರು.
ಕುಂದಪ್ರಭದ ಬೆಳ್ಳಿಹಬ್ಬ ಕಾರ್ಯಕ್ರಮಗಳಿಗೆ ಅತಿಥಿಗಳು ಹಾಗೂ ಆಗಮಿಸಿದ ಗಣ್ಯರು 25 ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಬಿ.ಅಪ್ಪಣ್ಣ ಹೆಗ್ಡೆಯವರು ಬೆಳ್ಳಿಹಬ್ಬ ಲಾಂಛನವನ್ನು ಬಿಡುಗಡೆ ಮಾಡಿದರು.
ಕೋ.ಶಿವಾನಂದ ಕಾರಂತ ಅಭಿನಂದನಾ ಪತ್ರ ವಾಚನ ಮಾಡಿದರು.
ಶ್ರೀನಿವಾಸ ಶೇಟ್ ಪ್ರಾರ್ಥಿಸಿದರು. ಉಪನ್ಯಾಸಕ ವಿಶ್ವನಾಥ ಕರಬ ನಿರೂಪಿಸಿದರು. ಲೇಖಕ ಪಿ.ಜಯವಂತ ಪೈ ವಂದಿಸಿದರು. ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಹೂವಿನ ಕೋಲು ಪ್ರದರ್ಶನದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.