ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಬಿಜೆಪಿ ಅಂತಿಮಗೊಳಿಸಿದೆ. ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಆಯ್ಕೆ ಭಾಗಶಃ ಪೂರ್ಣಗೊಂಡಿದ್ದು ಒಂದೆರಡು ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ. ಬಿಜೆಪಿ ಜಿಲ್ಲಾ ಘಟಕ ಜಿ.ಪಂ.ನ ಎಲ್ಲ 36 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ರಾಜ್ಯಾಧ್ಯಕ್ಷ ರಿಗೆ ಕಳುಹಿಸಿಕೊಟ್ಟಿದೆ.
ಅವರಿಂದ ಅನುಮೋದನೆಗೊಂಡ ಕೂಡಲೇ ಪ್ರಕಟಗೊಳ್ಳಲಿದೆ. ಇದಕ್ಕೂ ಮೊದಲು ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಿಗೆ ಪಕ್ಷದ ಜಿಲ್ಲಾ ವರಿಷ್ಠ ನಾಯಕರು ಭೇಟಿ ನೀಡಿ ಸ್ಥಳೀಯ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ. ಇನ್ನು, ಅಂತಿಮ ಹಂತದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ಸ್ಥಾನ ಗಳಿಗೆ ಆಯ್ಕೆ ನಡೆದಿದ್ದು ಇನ್ನುಳಿದ ಸ್ಥಾನಗಳಿಗೆ ಅಭ್ಯರ್ಥಿ ಅಂತಿಮ ಪ್ರಕ್ರಿಯೆ ನಡೆಯುತ್ತಿದೆ. ಪಕ್ಷದ ರಾಜ್ಯಘಟಕದಿಂದ ವೀಕ್ಷಕ ರಾಗಿ ನೇಮಕಗೊಂಡಿರುವ ವಿ.ಆರ್. ಸುದರ್ಶನ್ ಅವರು ಈಗಾಗಲೇ ಜಿಲ್ಲೆಗೆ ಆಗಮಿಸಿ ಜಿಲ್ಲಾ ನಾಯಕರು ಹಾಗೂ ಬ್ಲಾಕ್ ಅಧ್ಯಕ್ಷರ ಅಭಿಪ್ರಾಯ ಗಳನ್ನು ಆಲಿಸಿದ್ದಾರೆ. ಆಭ್ಯರ್ಥಿಗಳ ಆಯ್ಕೆಗೆ ನೇಮಕ ಗೊಂಡಿರುವ ಸಮಿತಿಯು ಅಭ್ಯರ್ಥಿ ಗಳ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ.