ಮಂಗಳೂರು: ಕೃಷಿಯಲ್ಲದ ಕುಮ್ಕಿ ಜಾಗವನ್ನು ಒತ್ತುವರಿ ಮಾಡಬೇಕೆಂದು ರಾಜ್ಯ ಸರ್ಕಾರದ ಕಂದಾಯ ಸಚಿವರು ಕೋರ್ಟ್ ಗೆ ಅಫಿದವಿತ್ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಒತ್ತುವರಿಯನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವಹಿಸಿದ್ದು, ಇದೀಗ ರೈತರಿಗೆ ತೊಂದರೆಯನ್ನುಂಟು ಮಾಡ ಹೊರಟಿರುವ ರಾಜ್ಯ ಸರ್ಕಾರದ ನಡೆ ಸರಿಯಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ
.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ನಾವು ರೈತರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಈ ಮೂಲಕ ರೈತ ವಿರೋಧಿಯಾಗಿ ಕೃಷಿಯಲ್ಲದ ಕುಮ್ಕಿ ಜಾಗವನ್ನು ಒತ್ತುವರಿ ಮಾಡಲು ಹೊರಟಿದೆ ಎಂದು ಅವರು ಆರೋಪಿಸಿದರು.