Thursday 28th, March 2024
canara news

ಕಡತಗಳನ್ನು ವಿಲೇವಾರಿ ಮಾಡಲು ಸರ್ವೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Published On : 29 Jan 2016   |  Reported By : Canaranews Network


ಮಂಗಳೂರು: ಬೆಳ್ತಂಗಡಿ ತಾಲೂಕು ಕಚೇರಿ ಪ್ರತಿ ಬಾರಿ ಭೇಟಿ ನೀಡಿದಾಗ ನನಗೆ ಸರ್ವೆ ಇಲಾಖೆಯ ಸಮಸ್ಯೆಗಳೆ ಕಂಡು ಬರುತ್ತಿದೆ.

ಜನರು ಕೂಡ ತನ್ನ ಬಳಿ ಸರ್ವೆ ಇಲಾಖೆ ಸಮಸ್ಯೆಗಳನ್ನು ಮುಂದಿಡುತ್ತಿದ್ದು, ಸರ್ವೆ ಇಲಾಖೆಯವರು ಯಾಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಹೇಳಿದರು.ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸರ್ವೆ ಇಲಾಖೆಗೆ ಯಾವುದೇ ಅರ್ಜಿಗಳನ್ನು ನೀಡಿದರೂ ಅದು ಸರ್ವೆ ಇಲಾಖೆಯಲ್ಲಿ ವಿಲೇವಾರಿಯಾಗುತ್ತಿಲ್ಲ.ವರ್ಷ ಕಳೆದರೂ ಅದು ಅಲ್ಲಿಯೇ ಉಳಿದುಕೊಳ್ಳುತ್ತಿದೆ.

ಈ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಯವರು ಸರ್ವೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕರೆ ಮಾಡಿ ವಾರದೊಳಗೆ ಬೆಳ್ತಂಗಡಿ ಕಚೇರಿಗೆ ಬಂದು ಪರಿಶೀಲನೆ ನಡೆಸಿ ಉಳಿದುಕೊಂಡಿರುವ ಕಡತಗಳನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here