ಮಂಗಳೂರು: ಜೀವನ್ಮರಣ ಹೋರಾಟ ನಡೆಸಿ ಹುತಾತ್ಮರಾದ ಧಾರವಾಡ ಮೂಲದ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಅವರ ಜೀವನ ಯುವ ಜನಾಂಗಕ್ಕೆ ಮಾದರಿಯಾಗಿದೆ ಎಂದು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು,ಬಹಳ ಧೈರ್ಯಶಾಲಿಯಾಗಿದ್ದ ಹನುಮಂತಪ್ಪ ಕೊಪ್ಪದ್ ಅವರ ಜೀವನ ಚರಿತ್ರೆ ಬರೆದು ಪ್ರಾಥಮಿಕ ಶಿಕ್ಷಣದ ಪಾಠ ಪುಸ್ತಕದಲ್ಲಿ ಸೇರ್ಪಡೆ ಗೊಳಿಸಬೇಕು.
ಅಲ್ಲದೆ ಹನುಮಂತಪ್ಪ ಅವರಿಗಾಗಿ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಿಸಬೇಕು ಎಂದು ಪೂಜಾರಿ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಈ ಧೀರ ಯೋಧನ ಕುಟುಂಬಕ್ಕೆ ಮತ್ತು ರಾಜ್ಯದ ಇತರ ಇಬ್ಬರು ಹುತಾತ್ಮರ ಕುಟುಂಬಗಳಿಗೆ ಸರಕಾರದ ವತಿಯಿಂದ ಭೂಮಿ ಕೊಟ್ಟು ಅವರಿಗೆ ಆತ್ಮಸ್ಥೈರ್ಯ ಮತ್ತು ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕು ಎಂದು ಪೂಜಾರಿ ಮನವಿ ಮಾಡಿದ್ದಾರೆ.