Thursday 25th, April 2024
canara news

ಅಪ್ರಾಪ್ತೆಯ ಅಪಹರಣ; ಆರೋಪಿಗಾಗಿ ಶೋಧ

Published On : 27 Feb 2016   |  Reported By : Canaranews Network


ಮಂಗಳೂರು: ಯುವಕನೋರ್ವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯೋರ್ವಳನ್ನು ಅಪಹರಣಗೈದಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಅಪಹರಿಸಿದ ಯುವಕನನ್ನು ಕುಂಪಲ ಮೂರುಕಟ್ಟೆ ನಿವಾಸಿ ಶಶಿ(೨೧) ಎಂದು ಗುರುತಿಸಲಾಗಿದೆ.

ಈತ ಕುಂಪಲದಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ. ಫೆ.೨೦ರಂದು ಶಾಲೆಗೆಂದು ತೆರಳಿದ ವಿದ್ಯಾರ್ಥಿನಿ ಮರಳಿ ಮನೆಗೆ ಬಾರದಿರುವುದನ್ನು ಕಂಡ ಮನೆಮಂದಿ ಸ್ಥಳೀಯರಲ್ಲಿ ವಿಚಾರಿಸಿದಾಗ ನೆರೆಮನೆಯ ಯುವಕ ಕೂಡ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಆಧಾರದ ಮೇಲೆ ಶಶಿ ಎಂಬಾತನೆ ಬಾಲಕಿಯನ್ನು ಅಪಹರಿಸಿರಬಹುದೆಂದು ಬಾಲಕಿಯ ಪೋಷಕರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here