ಮಂಗಳೂರು: ಮಾಧ್ಯಮದವರ ಕೇಳಿದ ಪ್ರಶ್ನೆಗೆ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಅವರು ಉಡಾಫೆ ಉತ್ತರ ನೀಡಿದ ಹಿನ್ನೆಲೆಯಲ್ಲಿ ಪತ್ರಕರ್ತರು ಸುದ್ದಿಗೋಷ್ಠಿ ಬಹಿಷ್ಕರಿಸಿ ಹೊರನಡೆದ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.
ಸಿಎಂ ವಾಚ್ ಹಾಗೂ ದ.ಕ.ಜಿಲ್ಲಾ ಮರಳುಗಾರಿಕೆಯ ಬಗ್ಗೆ ಜನಾರ್ದನ ಪೂಜಾರಿ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ಆ ಸಂದರ್ಭ ಪತ್ರಕರ್ತನೋರ್ವ ಕೇಳಿದ ಪ್ರಶ್ನೆಗೆ ಜನಾರ್ಧನ ಪೂಜಾರಿ ಅವರು ಉತ್ತರಿಸಲು ನಿರಾಕರಿಸಿದರು. ಇದರಿಂದಾಗಿ ಎಲ್ಲಾ ಪತ್ರಕರ್ತರು ಸುದ್ದಿಗೋಷ್ಠಿಯನ್ನು ಬಹಿಷ್ಕರಿಸಿ ಹೊರನಡೆದರು.