ಮಂಗಳೂರು: ಈಚರ್ ಲಾರಿ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಬಜ್ಪೆಯ ಎಡಪದವು ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಿವಾಸಿ ಕಲ್ಲಪ್ಪ, ಕಾರ್ಕಳ ನಿವಾಸಿ ಪ್ರಕಾಶ್ ರಾವ್, ಜಾರ್ಖಂಡ್ ನಿವಾಸಿಗಳಾದ ಸೋನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ.
ಇನೋರ್ವ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಮೂದಬಿದ್ರೆಯಿಂದ ಬರುತ್ತಿದ್ದ ಈಚರ್ ಲಾರಿ ಎಡಪದವು ಭಜನಾಮಂದಿರ ಬಳಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈಚರ್ ಲಾರಿಯಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.