Wednesday 24th, April 2024
canara news

ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ; ಬೈಕ್ ಸವಾರ ಬಲಿ

Published On : 10 Mar 2016   |  Reported By : Canaranews Network


ಮಂಗಳೂರು: ಅತೀ ವೇಗದಿಂದ ಬಂದ ಟಿಪ್ಪರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಂಜೆ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಉಪ್ಪಿನಂಗಡಿಯ ಆದಿತ್ಯ ಹೊಟೇಲ್ ಬಳಿ ನಡೆದಿದೆ. ಘಟನೆ ಬಳಿಕ ಲಾರಿ ನಿಲ್ಲಿಸಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಉಪ್ಪಿನಂಗಡಿ ಗ್ರಾಮದ ಮಠ ಹಿರ್ತಡ್ಕ ನಿವಾಸಿ ಅಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಹಸೈನಾರ್ (28) ಮೃತ ದುರ್ದೈವಿ.ಚಾಲಕ ವೃತ್ತಿ ನಡೆಸುವ ಮುಹಮ್ಮದ್ ಹಸೈನಾರ್ ತನ್ನ ಮನೆ ಕಡೆ ಟಿವಿಎಸ್ ಜುಪಿಟರ್ ಮೊಪೆಡ್ನಲ್ಲಿ ತೆರಳುತ್ತಿದ್ದು, ಆದಿತ್ಯ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿ ದ್ವಿಚಕ್ರ ವಾಹನ ನಿಲ್ಲಿಸಿ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು.

ನೆಲ್ಯಾಡಿ ಕಡೆ ಡಾಮರು ಮಿಶ್ರಣ ಸಾಗಿಸುತ್ತಿದ್ದ ರಾಜ್ಕಮಲ್ ಕನ್ಸ್ಟ್ರಕ್ಷನ್ನವರಿಗೆ ಸೇರಿದ ಟಿಪ್ಪರ್ ಅತೀ ವೇಗ ಹಾಗೂ ಅಜಾಗರುಕತೆಯಿಂದ ಬಂದು ರಸ್ತೆ ಬದಿ ನಿಂತಿದ್ದ ಮುಹಮ್ಮದ್ ಹಸೈನಾರ್ಗೆ ಡಿಕ್ಕಿ ಹೊಡೆಯಿತು. ಘಟನೆಯಿಂದ ಮುಹಮ್ಮದ್ ಹಸೈನಾರ್ ಸ್ಥಳದಲ್ಲಿಯೇ ಸಾವನ್ನಪಿದ್ದು, ದ್ವಿಚಕ್ರ ವಾಹನ ಛಿದ್ರವಾಗಿ ಹೋಗಿದೆ.ಮುಹಮ್ಮದ್ ಹಸೈನಾರ್ ವಿವಾಹಿತರಾಗಿದ್ದು, ಇಬ್ಬರು ಹೆಣ್ಣು ಹಾಗೂ ಓರ್ವ ಗಂಡು ಮಗುವನ್ನು ಹೊಂದಿದ್ದಾರೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here