ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪಡ್ರೆ ಎಂಬಲ್ಲಿ ರಿಕ್ಷಾ ಹಾಗೂ ಮಾರುತಿ ಸ್ವಿಪ್ಟ್ ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ರಿಕ್ಷಾ ಚಾಲಕರನ್ನು ಸದಾನಂದ ಸುವರ್ಣ ಎಂದು ಗುರುತಿಸಲಾಗಿದೆ.
ಸದಾನಂದ ಸುವರ್ಣ ಅವರು ಪಡ್ರೆಯಿಂದ ರಾ.ಹೆ.೬೬ರಲ್ಲಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವೆಳೆ ಉಡುಪಿ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ರಿಕ್ಷಾ ನಜ್ಜುಗುಜ್ಜಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.