Friday 26th, April 2024
canara news

ಗ್ರಾಮಕರಣಿಕನ ಮೇಲೆ ಹಲ್ಲೆ;ಪ್ರಕರಣ ದಾಖಲು

Published On : 11 Mar 2016   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಗ್ರಾಮ ಕರಣಿಕ ಆತ್ಮಾನಂದ ಎಂಬವರು ಕರ್ತವ್ಯನಿರತರಾಗಿದ್ದಾಗ ಪಡಂಗಡಿ ಗ್ರಾ.ಪಂ. ಉಪಾಧ್ಯಕ್ಷ ಸಂತೋಷ್ ಕುಮಾರ್ ಎಂಬವರು ಹಲ್ಲೆ ನಡೆಸಿರುವುದಾಗಿ ಬೆಳ್ತಂಗಡಿ ಪೊಲೀಸರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗ್ರಾಮಕರಣಿಕರು ಬುಧವಾರ ಕಚೇರಿಯಲ್ಲಿದ್ದಾಗ ಸ್ಥಳೀಯರಾದ ಅಬ್ದುಲ್ ರಹಿಮಾನ್ ಎಂಬವರು ಕಚೇರಿಗೆ ಬಂದು ಪ್ರಕೃತಿ ವಿಕೋಪದಡಿಯಲ್ಲಿ ಪರಿಹಾರ ಸಿಗಲಿದೆಯೇ ಎಂದು ಕೇಳಿದ್ದಾರೆ.

ಅದಕ್ಕೆ ಮಳೆಗಾಲದಲ್ಲಿ ಮಾತ್ರ ಪರಿಹಾರ ನೀಡಲಾಗುವುದು ಎಂದು ಉತ್ತರಿಸಿದಾಗ ಅಲ್ಲಿಗೆ ಬಂದಿದ್ದ ಸಂತೋಷ್ ಕುಮಾರ್ ಅವರು ವಿನಾ ಕಾರಣ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here