Friday 29th, March 2024
canara news

ನೇತ್ರಾವತಿ ಸೇತುವೆಯಿಂದ ಹಾರಿ ಅಪರಿಚಿತನಿಂದ ಆತ್ಮಹತ್ಯೆ

Published On : 11 Mar 2016   |  Reported By : Canaranews Network


ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸೇತುವೆ ಬದಿಯಿಂದ ನಡೆದುಕೊಂಡು ಬಂದು ನಡುಭಾಗದಲ್ಲಿ ಏಕಾಏಕಿ ನೀರಿಗೆ ದುಮುಕಿದ್ದಾನೆ.

ಇದನ್ನು ಸೇತುವೆಯ ಕೆಳಭಾಗದಲ್ಲಿ ನದಿಯಲ್ಲಿ ಮರಳು ತೆಗೆಯುತ್ತಿದ್ದವರು ಹಾಗೂ ಸೇತುವೆಯಲ್ಲಿ ತೆರಳುತ್ತಿದ್ದವರು ಗಮನಿಸಿದ್ದಾರೆ. ಕೂಡಲೆ ಅಲ್ಲಿನ ಸ್ಥಳೀಯರು ಆತನ ರಕ್ಷಣೆಗೆ ಮುಂದಾದರೂ ಅಪರಿಚಿತ ವ್ಯಕ್ತಿ ನೀರು ಪಾಲಾಗಿದ್ದನು.ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿಗಳು ನೀರುಪಾಲಾದ ಅಪರಿಚಿತನಿಗಾಗಿ ಶೋಧ ಮುಂದುವರಿಸಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here