ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೈದಿರುವ ಘಟನೆ ಶುಕ್ರವಾರ ಮಧ್ಯಾಹ್ನ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೋರ್ವ ಸೇತುವೆ ಬದಿಯಿಂದ ನಡೆದುಕೊಂಡು ಬಂದು ನಡುಭಾಗದಲ್ಲಿ ಏಕಾಏಕಿ ನೀರಿಗೆ ದುಮುಕಿದ್ದಾನೆ.
ಇದನ್ನು ಸೇತುವೆಯ ಕೆಳಭಾಗದಲ್ಲಿ ನದಿಯಲ್ಲಿ ಮರಳು ತೆಗೆಯುತ್ತಿದ್ದವರು ಹಾಗೂ ಸೇತುವೆಯಲ್ಲಿ ತೆರಳುತ್ತಿದ್ದವರು ಗಮನಿಸಿದ್ದಾರೆ. ಕೂಡಲೆ ಅಲ್ಲಿನ ಸ್ಥಳೀಯರು ಆತನ ರಕ್ಷಣೆಗೆ ಮುಂದಾದರೂ ಅಪರಿಚಿತ ವ್ಯಕ್ತಿ ನೀರು ಪಾಲಾಗಿದ್ದನು.ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿಗಳು ನೀರುಪಾಲಾದ ಅಪರಿಚಿತನಿಗಾಗಿ ಶೋಧ ಮುಂದುವರಿಸಿದ್ದಾರೆ.