ಮಂಗಳೂರು: ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳ್ಳಲು ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಕಾರಣ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಜಾರಿಯಲ್ಲಿ ಬಿಜೆಪಿ ಪಾತ್ರವಿದ್ದರೂ ಕೂಡ ಈ ಯೋಜನೆಯನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ, ಎತ್ತಿನಹೊಳೆ ಯೋಜನೆ ಯಶಸ್ವಿಯಾದರೂ, ವಿಫಲವಾದರೂ ಎಲ್ಲಾ ಪಕ್ಷಗಳು ಸಮಾನ ಹೊಣೆಗಾರರು. ಯಾರೋಬ್ಬರ ಮೇಲೂ ಗೂಬೆ ಕೂರಿಸುವುದು ಸರಿಯಲ್ಲ.
ಬಿಜೆಪಿಯವರು ತಾವು ಮೆತ್ತಿಕೊಂಡ ಮಸಿಯನ್ನು ಮತ್ತೊಬ್ಬರ ಮುಖದ ಮೇಲೆ ಒರೆಸುತ್ತಿದ್ದಾರೆ ಎಂದು ಅವರು ಟೀಕಿಸಿದರು.