Thursday 18th, April 2024
canara news

ಮಂಗಳೂರಿನಲ್ಲಿ ಎಲೆಕ್ಟ್ರಿಕ್ ಗುತ್ತಿಗೆದಾರನ ಬರ್ಬರ ಹತ್ಯೆ

Published On : 22 Mar 2016   |  Reported By : Canaranews Network


ಮಂಗಳೂರು: ಮಂಗಳೂರು ಕೊಡಿಯಾಲ್ಬೈಲ್ ಸಮೀಪದ ಕಲಾಕುಂಜ ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಎಲೆಕ್ಟ್ರಿಕಲ್ ಗುತ್ತಿಗೆದಾರ ವಿನಾಯಕ ಬಾಳಿಗ (51) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಸೋಮವಾರ ಮುಂಜಾನೆ 5.30ರ ಸುಮಾರಿಗೆ ಬಾಳಿಗಾ ಅವರು ಜಾಗಿಂಗ್ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ಕೊಲೆಗಾರರು ಮಚ್ಚಿನಿಂದ ತಲೆಗೆ ಬಡಿದು ಹತ್ಯೆ ಮಾಡಿದ್ದಾರೆ.ಏಟಿನ ತೀವ್ರತೆಗೆ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ ಬಾಳಿಗರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ಡಾ. ಸಂಜೀವ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here