ಮಂಗಳೂರು: ಮಂಗಳೂರು ಕೊಡಿಯಾಲ್ಬೈಲ್ ಸಮೀಪದ ಕಲಾಕುಂಜ ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಎಲೆಕ್ಟ್ರಿಕಲ್ ಗುತ್ತಿಗೆದಾರ ವಿನಾಯಕ ಬಾಳಿಗ (51) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ ಸೋಮವಾರ ಮುಂಜಾನೆ 5.30ರ ಸುಮಾರಿಗೆ ಬಾಳಿಗಾ ಅವರು ಜಾಗಿಂಗ್ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ಕೊಲೆಗಾರರು ಮಚ್ಚಿನಿಂದ ತಲೆಗೆ ಬಡಿದು ಹತ್ಯೆ ಮಾಡಿದ್ದಾರೆ.ಏಟಿನ ತೀವ್ರತೆಗೆ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ ಬಾಳಿಗರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ದಾರಿ ಮಧ್ಯೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಡಿಸಿಪಿ ಡಾ. ಸಂಜೀವ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.