ಮಂಗಳೂರು: ಗುತ್ತಿಗೆದಾರ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಸೋಮವಾರ ನಸುಕಿನ ಜಾವ ಬೆಳಕಿಗೆ ಬಂದಿದೆ. ಕುಂಪಲ ಚಿತ್ರಾಂಜಲಿ ನಿವಾಸಿ ಲಕ್ಷ್ಮಣ್ ಮೇಸ್ತ್ರಿ(62) ಆತ್ಮಹತ್ಯೆಗೈದವರು.ಸೋಮವಾರ ನಸುಕಿನ ಜಾವ ಮನೆಯ ಹೊರಗಡೆ ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದಾರೆ.
ಪತ್ನಿ ಮನೆಯ ಹೊರಗಡೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಧರ್ಮಸ್ಥಳ ಸ್ವಸಹಾಯ ಸಂಘದ ಸೋಮೆಶ್ವರ ವಲಯದ ಅಧ್ಯಕ್ಷರಾಗಿದ್ದ ಇವರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆಗೈದಿದ್ದಾರೆ ಎನ್ನಲಾಗಿದೆ.ಉಳ್ಳಾಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.