Friday 26th, April 2024
canara news

ಬಾಲ್ಯ ವಿವಾಹಕ್ಕೆ ಪ್ರೇರಣೆ ನೀಡುವವರಿಗೆ ಶಿಕ್ಷೆ ; ಉಮಾಶ್ರೀ

Published On : 29 Mar 2016   |  Reported By : Canaranews Network


ಮಂಗಳೂರು: ಬಾಲ್ಯ ವಿವಾಹಕ್ಕೆ ಸಂಬಂಧಪಟ್ಟಂತೆ ಆರೋಪಿ ಸ್ಥಾನದಲ್ಲಿರುವವರಿಗೆ ಕನಿಷ್ಟ ಒಂದು ವರ್ಷ, ಗರಿಷ್ಟ ಎರಡು ವರ್ಷ ಶಿಕ್ಷೆಯನ್ನು ನೀಡುವ ಕಾನೂನನ್ನು ಜಾರಿಗೆ ತಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.

ಮಂಗಳೂರಿನಲ್ಲಿ ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲ್ಯ ವಿವಾಹವನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹೊಸ ನಿಯಾಮವಳಿಯನ್ನು ಜಾರಿಗೆ ತಂದಿದ್ದು, ಹಿಂದೆ ಬಾಲ್ಯವಿವಾಹಕ್ಕೆ ಕನಿಷ್ಟ ಶಿಕ್ಷೆಯಿರಲಿಲ್ಲ. ಇದೀಗ ಕನಿಷ್ಟ ಶಿಕ್ಷೆಯನ್ನು ರೂಪಿಸಲಾಗಿದೆ. ಬಾಲ್ಯ ವಿವಾಹಕ್ಕೆ ಪ್ರೇರಣೆ ನೀಡುವ ತಂದೆ, ತಾಯಿ, ದಲ್ಲಾಳಿಗಳಿಗೆ ಈ ಕಾನೂನು ವ್ಯಾಪ್ತಿಯಲ್ಲಿ ಶಿಕ್ಷೆಯಾಗಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಇಬ್ರಾಹಿಂ ಕೋಡಿಜಾಲ್, ಅಶ್ರಫ್, ಎ.ಸಿ.ಭಂಡಾರಿ, ಬಾಲಕೃಷ್ಣ ಶೆಟ್ಟಿ, ದಿವ್ಯಪ್ರಭಾ ಮೊದಲಾದವರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here