ಮಂಗಳೂರು: ಪ್ರಜಾವಾಣಿ ಪತ್ರಿಕೆಯ ಮಂಗಳೂರು ಆವೃತ್ತಿಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಹೈಮದ್ ಹುಸೇನ್ ಅವರು ಚಾರ್ಮಾಡಿ ಘಾಟ್ ನಲ್ಲಿ ಹೃದಯಾಘಾತದಿಂದ ಶುಕ್ರವಾರ ಸಾವನ್ನಪ್ಪಿದ್ದಾರೆ.
ಮೂಲತಃ ರಾಯಚೂರು ನಿವಾಸಿಯಾಗಿರುವ ಹೈಮದ್ ಅವರು ಪ್ರಜಾವಾಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಎಪ್ರಿಲ್ ೨೪ರಂದು ರಾಯಚೂರಿಗೆ ತೆರಳುವವರು ಇದ್ದರು. ಪತ್ರಕರ್ತರ ತಂಡ ಪಶ್ಚಿಮ ಘಟ್ಟಕ್ಕೆ ಅಧ್ಯಯನಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.