ಮಂಗಳೂರು: ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳ ರಕ್ಷಣೆಗೆ ಭ್ರಷ್ಟಚಾರ ನಿಗ್ರಹದಳ ರಚನೆ ಮಾಡಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಲ್ಲಿ ಎಸಿಬಿ ರಚನೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರದ ವಾದವಾಗಿದೆ. ಯಾವ ರಾಜ್ಯಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಲೋಕಾಯುಕ್ತ ಸಂಸ್ಥೆಯನ್ನೇ ನಿಷ್ಖ್ರೀಯಗೊಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಬ್ರಷ್ಟಚಾರ ಹುಟ್ಟು ಹಾಕಿದ್ದೆ ಬಿಜೆಪಿ ಸರ್ಕಾರ.
ಇದೀಗ ಅವರೇ ಭ್ರಷ್ಟಚಾರ ವಿರುದ್ಧ ಹೋರಾಟ ನಡೆಸುತ್ತಾರೆ. ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ,ಯುವ ಘಟಕದ ಅಕ್ಷಿತ್ ಸುವರ್ಣ, ಕಾರ್ಪೋರೇಟರ್ ಅಜೀಜ್ ಕುದ್ರೋಳಿ ಮೊದಲಾದವರು ಉಪಸ್ಥಿತರಿದ್ದರು.