Friday 26th, April 2024
canara news

ಉಳ್ಳಾಲ ರಾಜು ಕೋಟ್ಯಾನ್ ಕೊಲೆ ಪ್ರಕರಣ; ಮೂವರ ಬಂಧನ

Published On : 17 Apr 2016   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲ ಮೊಗವೀರಪಟ್ಣ ನಿವಾಸಿ ರಾಜ ಕೋಟ್ಯಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಉಳ್ಳಾಲ ಗ್ರಾಮ ನಿವಾಸಿ ಮೊಹಮ್ಮದ್ ಅಸ್ವೀರ್ ಯಾನೆ ಅಚ್ಚು (19) ಅಬ್ದುಲ್ ಮುತಾಲಿಕ್ ಯಾನೆ ಮುತ್ತು (20) ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಎಂದು ತಿಳಿದುಬಂದಿದೆ.ತಲೆಮರೆಸಿಕೊಂಡ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ಮಂಗಳವಾರದಂದು ಮೊಗವೀರಪಟ್ಣ ಕೋಟೆಪುರ ನಡುವಿನ ಬರಕಾ ಪಿಶ್ ಮಿಲ್ ಬಳಿ ಮೀನುಗಾರಿಕೆಗೆ ತೆರಳಿದ್ದ ಮೊಗವೀರಪಟ್ಣ ನಿವಾಸಿ ರಾಜ ಕೋಟ್ಯಾನ್ ಅವರನ್ನು ಕಲ್ಲಿನಿಂದ ಜಜ್ಜಿದ ಕೊಲೆಗೈಯಲ್ಲಾಗಿತ್ತು.ಇದಕ್ಕೆ ಸಂಬಂಧಿಸಿ ಸ್ಥಳೀಯರು ಇದೊಂದು ಕೊಲೆಯಾಗಿದ್ದು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಕೊಲೆಗಾರರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದರು ಇದರಿಂದ ಕೆಲಹೊತ್ತು ಸ್ಥಳದಲ್ಲಿ ಉದ್ವಿಘ್ನ ವಾತಾವರಣ ಸೃಷ್ಟಿಯಾಗಿತ್ತು.

ಸಿಸಿಟಿವಿ ಆಧಾರದಲ್ಲಿ ಬಂಧನ
ಘಟನೆಗೆ ಸಂಬಂಧಿಸಿದಂತೆ ಬರಕಾ ಫಿಶ್ ಮಿಲ್ ಬಳಿ ಉಳ್ಳಾಲ ಪೊಲೀಸ್ ಠಾಣೆಯಿಂದ ಅಳವಡಿಸಲಾಗಿದ್ದ ಸಿಸಿಟಿವಿ ಮಹತ್ವದ ಪುರಾವೆ ನೀಡಿದೆ. ಘಟನೆಯ ಬಳಿಕ 6 ಜನರ ತಂಡ ಸ್ಥಳದಿಂದ ಹೋಗುವ ದೃಶ್ಯ ದೊರೆತಿದ್ದು ಇದರ ಆಧಾರದಲ್ಲಿ ಶಂಕಿತರನ್ನು ಬಂಧಿಸಲಾಗಿದೆ.

15ಕ್ಕೂ ಹೆಚ್ಚು ಶಂಕಿತರ ವಿಚಾರಣೆ
ಘಟನೆಯ ಬಳಿಕ ಎಸ್ಐ ಭಾರತೀ ನೇತೃತ್ವದಲ್ಲಿ ಐವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಬಳಿಕ ವಿಶೇಷ ಪೊಲೀಸರ ತಂಡ ಸುಮಾರು 15ಕ್ಕೂ ಹೆಚ್ಚು ಜನರನ್ನು ತನಿಖೆಗೆ ಒಳಪಡಿಸಿ ಕೊಲೆ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here