ಮಂಗಳೂರು: ಮಲಗಿದ್ದ ಯುವಕನೋರ್ವ ಸಿಡಿಲಿನ ಆರ್ಭಟಕ್ಕೆ ಬಲಿಯಾದ ಘಟನೆ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಶಾಂತಿ ನಗರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಗದೀಶ್(೨೬) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿ ನಿದ್ರಿಸುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಜಗದೀಶ್ ಸಾವನ್ನಪ್ಪಿದ್ದಾರೆ.
ಘಟನೆಯಿಂದ ಜಗದೀಶ್ ಅವರ ತಾಯಿ ಹಾಗೂ ಅಣ್ಣನಿಗೂ ಆಘಾತವಾಗಿದೆ ಎನ್ನಲಾಗಿದೆ. ಘಟನೆ ಕುರಿತಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.