ಮಂಗಳೂರು: ಮುಂದಿನ ಬಜೆಟ್ ನಲ್ಲಿ ಮಂಗಳೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಪರಿಗಣಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಂಗಳೂರಿನ ಪುರಭವನದಲ್ಲಿ ೪೧ ಕೋಟಿ ರೂ.ಗಳ ಜಿಲ್ಲಾ ಕಚೇರಿಗಳ ಸಂಕೀರ್ಣ ಸೇರಿದಂತೆ ಇತರ ಹಲವು ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು.
ಕಂದಾಯ ಇಲಾಖೆಯಲ್ಲಿರುವ ಕಂದಾಯ ಸಮಸ್ಯೆ ಪರಿಹಾರಕ್ಕೆ ಬೆಂಗಳೂರಿನಲ್ಲಿ ತನ್ನ ನೇತೃತ್ವದಲ್ಲಿ ಸಭೆ ನಡೆಸಿ ಇತ್ಯರ್ಥಗೊಳಿಸಲಾಗುವುದು. ಜನರಿಗೆ ಕೊಟ್ಟ ಭರವಸೆ ಈಗಾಗಲೇ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.