ಮಂಗಳೂರು: ಎತ್ತಿನಹೊಳೆ ಯೋಜನೆ ಯಾವುದೇ ಕಾರಣಕ್ಕೂ ವಿಫಲವಾಗಲ್ಲ. ಈ ಯೋಜನೆ ಯಶಸ್ವಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು,ಈ ಯೋಜನೆ ಮುಖಾಂತರ ಬರಪೀಡಿತ ಪ್ರದೇಶಗಳಿಗೆ ನೀರುಣಿಸಲಾಗುತ್ತದೆ. ಈ ಯೋಜನೆ ಪೂರ್ಣಗೊಳ್ಳಲಿದೆ. ಈ ಯೋಜನೆಯಿಂದ ಯಾವುದೇ ಬಾಧಕವಿಲ್ಲ. ಹೋರಾಟಗಾರರಿಗೆ ಈ ಬಗ್ಗೆ ಸರಿಯಾದ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದರು.
ಬರ ಪರಿಸ್ಥಿತಿ ನಿಭಾಯಿಸಲು ಕ್ರಮ:
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗುತ್ತಿದೆ. ವಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. , ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ. ಕುಡಿಯುವ ನೀರಿಗೆ ಯಾವುದೆ ಕೊರತೆಯಿಲ್ಲದ ಹಾಗೆ ನೋಡಿಕೊಳ್ಳಲಾಗುವುದು ಎಂದರು.