ಮಂಗಳೂರು: ಕುದ್ರೋಳಿ ದೇವಾಲಯದಲ್ಲಿ ಮಹಿಳಾ ಅರ್ಚಕರನ್ನು ನೇಮಿಸುವ ಮೂಲಕ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಸಜಿಪ ಮೂಡಾ ಗ್ರಾಮದ ಸುಭಾಷ್ ನಗರದಲ್ಲಿ ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಸುಮಾರು ೧ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರವನ್ನು ಲೋಕಾರ್ಪಣೆಗೊಳಿಸಿ ಬಳಿಕ ಅವರು ಮಾತನಾಡಿದರು.
ಬಡವರು ಬ್ಯಾಂಕ್ ಮೆಟ್ಟಿಲು ಹತ್ತಲೂ ಸಾಧ್ಯವಾಗದ ಕಾಲದಲ್ಲಿ ಜನಾರ್ದನ ಪೂಜಾರಿ ವಿತ್ತ ಸಚಿವರಾಗಿದ್ದಾಗ ಮಾಡಿದ ಮಹಾ ಕಾರ್ಯದಿಂದಾಗಿ ಇಂದು ಬಡವರು ಬ್ಯಾಂಕ್ ಮೆಟ್ಟಿಲು ಹತ್ತುವಂತಾಗಿದೆ ಎಂದು ಪೂಜಾರಿಯವರನ್ನು ಶ್ಲಾಘಿಸಿದರು. ಈ ಸಂದರ್ಭ ಸಚಿವ ರಮಾನಾಥ ರೈ, ಸಚಿವ ಯು.ಟಿಖಾದರ್, ಸಚಿವ ಅಭಯಚದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.