ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ ವೇಳೆ ಮಾದ್ಯಮದವರ ಜೊತೆ ಮಾತನಾಡಿದ ಅವರು, ಮರವೂರಿನಲ್ಲಿ ಸೇತುವೆ ನಿರ್ಮಾಣ ಮಾಡುವ ಮುಖಾಂತರ ವಿಮಾನ ನಿಲ್ದಾಣ ರಸ್ತೆ ವಿಸ್ತರಿಸಿ ಅಭಿವೃದ್ಧಿ ಮಾಡಲಾಗುವುದು, ಹಳೆಯ ಬಂದರು ಅಭಿವೃದ್ಧಿಗೆ ಒತ್ತು ಸೇರಿದಂತೆ ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಬೇಡಿಕೆಗಳ ಈಡೇರಿಕೆಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭ ಸಚಿವರಾದ ರಮಾನಾಥ ರೈ, ಯು.ಟಿ.ಖಾದರ್, ಅಭಯಚಂದ್ರ ಜೈನ್, ಶಾಸಕರಾದ ಮೊಯಿದ್ದೀನಾ ಬಾವಾ, ಜೆ.ಆರ್ ಲೋಬೋ ಮೊದಲಾದವರು ಉಪಸ್ಥಿತರಿದ್ದರು.