ಮಂಗಳೂರು: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಸಾವ್ಯ ಎಂಬಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಇದೊಂದೊ ಕೊಲೆ ಪ್ರಕರಣ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸಾವ್ಯ ನಿವಾಸಿ ಸುಂದರ ಮೂಲ್ಯ ಎಂಬಾತನೆ ಮೃತ ವ್ಯಕ್ತಿಯಾಗಿದ್ದಾರೆ.
ಮೃತ ವ್ಯಕ್ತಿಯ ಮೈ ಮೇಲೆ ರಕ್ತದ ಕಲೆಗಳು ಕಂಡು ಬಂದಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.