ಮಂಗಳೂರು: ದ.ಕ.ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಮೀನಾಕ್ಷಿ ಶಾಂತಿಗೋಡು ಹಾಗೂ ಉಪಾಧ್ಯಕ್ಷರಾಗಿ ಕಸ್ತೂರಿ ಪಂಜ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಶೇಖರ್ ಕುಕ್ಕೆಡಿ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ೨೧ ಸದಸ್ಯರ ಸರಳ ಬಹುಮತ ಪಡೆದ ಕಾರಣದಿಂದ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಜಯ ಸಾಧಿಸಿದ್ದಾರೆ.
ಉಪಾಧ್ಯಕ್ಷರಾಗಿ ಕಟೀಲು ಕ್ಷೇತ್ರದ ಬಿಜೆಪಿ ಸದಸ್ಯ ಕಸ್ತೂರಿ ಪಂಜ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಮೈಸೂರು ವಿಭಾಗೀಯ ಆಯುಕ್ತ ಕುಂಜಪ್ಪ ಅವರ ನೇತೃತ್ವದಲ್ಲಿ ನಡೆಯಿತು.