ಮಂಗಳೂರು: ಮಂಗಳೂರು ವ್ಯಾಪ್ತಿಗೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ದಿನೇ-ದಿನೇ ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಕುಡಿಯುವ ನೀರನ್ನು 3ದಿನಕ್ಕೊಮ್ಮೆ ಮಾತ್ರ ಪೂರೈಸುವ ನಿರ್ಧಾರವನ್ನು ಶನಿವಾರದಿಂದ ಕೈಗೊಳ್ಳಲಾಗಿದೆ.
ಮಳೆ ಬಾರದೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಎ. 20ರಿಂದ ಮಂಗಳೂರು ವ್ಯಾಪ್ತಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಸುವ ನಿರ್ಧಾರವನ್ನು ಸಚಿವ ರಮಾನಾಥ ರೈ ಉಪಸ್ಥಿತಿಯಲ್ಲಿ ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಕೈಗೊಂಡಿತ್ತು. ಆದರೆ ಎಎಂಆರ್ ಡ್ಯಾಂನಲ್ಲಿದ್ದ ನೀರನ್ನು ಪೂರ್ಣವಾಗಿ ಹರಿಯಬಿಟ್ಟರೂ ತುಂಬೆ ಡ್ಯಾಂನಲ್ಲಿ ನೀರಿನ ಪ್ರಮಾಣ ದಿನೇ ದಿನೇ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.