ಮಂಗಳೂರು: ಪತಿಯೊಬ್ಬ ತನ್ನ ಪತ್ನಿಯನ್ನೆ ಕಡಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕೊಲೆಯಾದವರನ್ನು ಕುಸುಮಾವತಿ(೩೦) ಎಂದು ಗುರುತಿಸಲಾಗಿದ್ದು,ಆರೋಪಿ ಪತಿಯನ್ನು ಅಣ್ಣು ಯಾನೆ ಜಯಾನಂದ ಗೌಡ(೩೪) ಎಂದು ಗುರುತಿಸಲಾಗಿದೆ.
ಆರೋಪಿ ಜಯಾನಂದ ಮುಂಬೈಯಲ್ಲಿ ಹೊಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಊರಿಗೆ ಬಂದು ವಾಸವಾಗಿದ್ದ ಎನ್ನಲಾಗಿದೆ. ಘಟನೆ ಕುರಿತಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.