Tuesday 16th, April 2024
canara news

ವಿನಾಯಕ್ ಬಾಳಿಗ ಕೊಲೆ ಪ್ರಕರಣ; ಆರೋಪಿ ನರೇಶ್ ಶೆಣೈ ಆಪ್ತನ ಬಂಧನ

Published On : 08 May 2016   |  Reported By : Canaranews Network


ಮಂಗಳೂರು: ಮಂಗಳೂರಿನಲ್ಲಿ ನಡೆದ ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಅವರ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ತಲೆ ಮರೆಸಿಕೊಂಡಿದ್ದ ನಮೋ ಬ್ರಿಗೇಡ್ ಸ್ಥಾಪಕಾಧ್ಯಕ್ಷ ನರೇಶ್ ಶೆಣೈ ಆಪ್ತ ಎನ್ನಲಾದ ವಿಶ್ವನಾಥ್ ಭಟ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಚ್ಚಿ ಮೂಲದ ವಿಶ್ವನಾಥ್ ಭಟ್ ಎಂಬಾತನನ್ನು ಪೊಲೀಸರು ಕಾರ್ಕಳದಿಂದ ವಶಕ್ಕೆ ಪಡೆದಿದ್ದಾರೆ.

ಈತ ಸ್ವಾಮೀಜಿಯೋರ್ವರ ಸಹಾಯಕ ಎನ್ನಲಾಗಿದ್ದು, ಸ್ವಾಮೀಜಿಯೊಂದಿಗೆ ಕಾರ್ಕಳಕ್ಕೆ ಬಂದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ್ ಬಾಳಿಗ ಅವರನ್ನು ದುಷ್ಕರ್ಮಿಗಳು ಮಾರ್ಚ್ ೨೧ರಂದು ಕೊಲೆ ಮಾಡಿದ್ದರು. ಕೊಲೆಯ ಬಳಿಕ ಮೂವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ನರೇಶ್ ಶೆಣೈ ತಲೆ ಮರೆಸಿಕೊಂಡಿದ್ದಾನೆ ಎಂಬ ಆರೋಪ ವ್ಯಕ್ತವಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here