ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದ ಕಾಸರಗೋಡಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ಹೋಗುವ ಮಾರ್ಗದಲ್ಲಿ ರವಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ರವಿವಾರ ಬೆಳಗ್ಗೆ 9.45 ಕ್ಕೆ ವಾಯು ಪಡೆಯ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಅವರನ್ನು ಬಿಜೆಪಿ ನಾಯಕರು ಸೇರಿದಂತೆ ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ, ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್, ಉಪಮೇಯರ್ ಸುಮಿತ್ರಾ ಮತ್ತು ಬಿಜೆಪಿ ನಾಯಕರು ಉಪಸ್ಥಿತರಿದ್ದು ಸ್ವಾಗತಿಸಿದರು.
ಬಳಿಕ ಪ್ರಧಾನಿ ಅವರು ಅಲ್ಲಿಂದಲೇ ಹೆಲಿಕಾಪ್ಟರ್ ಮೂಲಕ ಕಾಸರಗೋಡಿಗೆ ತೆರಳಿದರು. ಕಾಸರಗೋಡಿನಲ್ಲಿ ಚುನಾವಣಾ ಪ್ರಚಾರ ಮುಗಿಸಿದ ಬಳಿಕ ಮಧ್ಯಾಹ್ನ 12 ಗಂಟೆಗೆ ವಾಪಸ್ ಹೆಲಿಕಾಪ್ಟರ್ನಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಬಳಿಕ ವಿಮಾನದಲ್ಲಿ ಕೇರಳಕ್ಕೆ ತೆರಳಿದರು.