Friday 29th, March 2024
canara news

ಮಂಗಳೂರಿಗೆ ಲಕ್ಯಾ ನೀರು; ಅಧಿಕಾರಿಗಳ ತಂಡ ಲಕ್ಯಾಕ್ಕೆ ಭೇಟಿ, ಪರಿಶೀಲನೆ

Published On : 11 May 2016   |  Reported By : Canaranews Network


ಮಂಗಳೂರಿಗೆ ನೀರಿನ ಅಭಾವ ಎದುರಾಗಿರುವ ಹಿನ್ನೆಲೆಧಿಯಲ್ಲಿ ಕುದುರೆಮುಖದ ಲಕ್ಯಾ ಜಲಾಶಯದಿಂದ ನೀರು ಪಡೆಯಲು ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ.

ಮೇಯರ್‌ ಹರಿನಾಥ್‌ ನೇತೃತ್ವದಲ್ಲಿ ಕಾರ್ಪೊರೇಟರ್‌ ಹಾಗೂ ಅಧಿಕಾರಿಗಳ ತಂಡ ಸೋಮವಾರ ಲಕ್ಯಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಗೆ ಸೇರಿರುವ ಲಕ್ಯಾ ಜಲಾಶಯದಲ್ಲಿ ಯಥೇತ್ಛ ನೀರಿನ ಸಂಗ್ರಹವಿದೆ. ಪ್ರಸ್ತುತ ಕಂಪೆನಿಯ ಮಂಗಳೂರು ಸ್ಥಾವರಕ್ಕೆ ದಿನಂಪ್ರತಿ 2 ಎಂಜಿಡಿ ನೀರು ಗುರುತ್ವಾಕರ್ಷಣ ಶಕ್ತಿ ಮೂಲಕ ಸರಬರಾಜು ಆಗುತ್ತಿದೆ ಎಂದು ಮೇಯರ್‌ ತಿಳಿಸಿದರು.

ಜಿಲ್ಲೆಯಲ್ಲಿ ತೀವ್ರ ಬರದ ಹಿನ್ನೆಲೆಯಲ್ಲಿ ಲಕ್ಯಾದಿಂದ ಕುಡಿಯುವ ಉದ್ದೇಶಕ್ಕಾಗಿ ನೀರು ತರಲು ಅವಕಾಶವಿದೆ. ಪಂಪ್‌ ಬಳಸಿದರೆ ದಿನವೊಂದಕ್ಕೆ ಸುಮಾರು 6 ಎಂಜಿಡಿ ನೀರು ಸರಬರಾಜಿಗೆ ಅವಕಾಶವಿದೆ. ಇದು ಪಣಂಬೂರು ಹಾಗೂ ಸುರತ್ಕಲ್‌ ಭಾಗದ ಜನರ ಕುಡಿಯುವ ನೀರು ಆವಶ್ಯಕತೆಯನ್ನು ಪೂರೈಸಲು ಸಾಕಾಗಲಿದೆ ಎಂದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here