ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ಸಂಜೆ ವೇಳೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನೇತ್ರಾವತಿ ಜಲಾಶಯ ವ್ಯಾಪ್ತಿಯಲ್ಲಿ ಮಳೆ ಬಿದ್ದ ಹಿನ್ನೆಲೆಯಲ್ಲಿ ತುಂಬೆ ವೆಂಟೆಡ್ ಡ್ಯಾಂಗೆ ನೀರಿನ ಹರಿವಿನಲ್ಲಿ ಸ್ವಲ್ಪ ಸುಧಾರಣೆಯಾಗಿದ್ದು, ನೀರಿನ ಮಟ್ಟದಲ್ಲಿ ಸುಮಾರು 5 ಇಂಚುಗಳಷ್ಟು ಏರಿಕೆಯಾಗಿದೆ. ಗುರುವಾರ 4 ಅಡಿ ಇದ್ದ ನೀರಿನ ಮಟ್ಟ ಶುಕ್ರವಾರ 4.5 ಅಡಿಗೆ ಏರಿಕೆಯಾಗಿದೆ.ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಮಂಗಳೂರು ನಗರ ಹಾಗೂ ಜಿಲ್ಲೆಯ ಜನತೆಯಲ್ಲಿ ಮಳೆ ಒಂದಷ್ಟು ಆಶಾಭಾವನೆ ಮೂಡಿಸಿದೆ. ನೀರಿನ ಅಭಾವದಿಂದ ತೋಟಗಾರಿಕಾ ಬೆಳೆಗಳು, ಕೃಷಿ ಬಾಧಿತವಾಗಿದ್ದು, ಇದೀಗ ಮಳೆ ರೈತರಲ್ಲಿ ತುಸು ನೆಮ್ಮದಿ ಮೂಡಿಸಿದೆ.
ಹಾಗೂ ದ.ಕ. ಜಿಲ್ಲೆಯಲ್ಲಿ ಒಟ್ಟು 174.7 ಮಿ.ಮೀ. ಮಳೆ ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಗುರುವಾರ ಸಂಜೆ ಹಾಗೂ ರಾತ್ರಿ ಉತ್ತಮ ಮಳೆಯಾಗಿದೆ. ಮಾಪನ ಕೇಂದ್ರದಲ್ಲಿ ದಾಖಲಾಗಿರುವ ಅಂಕಿ-ಅಂಶ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 174.7 ಮಿ.ಮೀ. ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.