Friday 29th, March 2024
canara news

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ತೃತೀಯ ಸ್ಥಾನಕ್ಕೆ ತೃಪ್ತಿ ಪಡೆದ ದ.ಕ.

Published On : 19 May 2016   |  Reported By : Canaranews Network


ಮಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಜಿಲ್ಲೆಗೆ ಈ ಬಾರಿ ಸಿಹಿಸುದ್ದಿ. ಕಳೆದ ವರ್ಷ ರಾಜ್ಯದಲ್ಲಿ 8ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 3ನೇ ಸ್ಥಾನ ಪಡೆದುಕೊಂಡಿದೆ. ಆ ಮೂಲಕ ಟಾಪ್‌ ಮೂರರೊಳಗಿನ ಸ್ಥಾನಕ್ಕಾಗಿ ಶ್ರಮಿಸಿದ ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಶ್ರಮ ಫಲ ನೀಡಿದೆ.2015-16ನೇ ಸಾಲಿನಲ್ಲಿ ದ.ಕ. ಜಿಲ್ಲೆಯಿಂದ ಒಟ್ಟು 15,291 ಹುಡುಗರು ಮತ್ತು 15,375 ಹುಡುಗಿಧಿಯರು ಸೇರಿ ಒಟ್ಟು 30,666 ಮಂದಿ ಹಾಜರಾಗಿದ್ದು , ಈ ಪೈಕಿ 12,836 ಮಂದಿ ಹುಡುಗರು ಮತ್ತು 14,152 ಮಂದಿ ಹುಡುಗಿಯರು ಸೇರಿ ಒಟ್ಟು 26,988 ಮಂದಿ ಉತ್ತೀರ್ಣರಾಗಿದ್ದಾರೆ. ಜಿಲ್ಲೆಗೆ ಈ ಬಾರಿ ಶೇ. 88.01 ಫಲಿತಾಂಶ ಬಂದಿದೆ.

ಬೆಳ್ತಂಗಡಿಯ ವಿದ್ಯಾರ್ಥಿ ರಾಜ್ಯಕ್ಕೆ ದ್ವಿತೀಯ
ದ.ಕ. ಜಿಲ್ಲೆಯ ಬೆಳ್ತಂಗಡಿಯ ಲಾಯಿಲ ಸೈಂಟ್‌ ಮೇರೀಸ್‌ ಆಂಗ್ಲ ಶಾಲೆಯ ವಿದ್ಯಾರ್ಥಿ ಸುಶ್ರುತ್‌ ಯು.ಕೆ. 624 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಕಾಮತ್‌, ಸುರತ್ಕಲ್‌ ವಿದ್ಯಾದಾಯಿನಿ ಆಂಗ್ಲ ಮಾಧ್ಯಮ ಶಾಲೆಯ ರಮ್ಯಾಶ್ರೀ ಅವರಿಗೆ 623 ಅಂಕ ಲಭಿಸಿದೆ. ಡೊಂಗರಕೇರಿಯ ಕೆನರಾ ಪ್ರೌಢಶಾಲೆ (ಪ್ರಧಾನ) ವಿದ್ಯಾರ್ಥಿ ಅಜಯ್‌ ಕೆ. ಪಿ., ಉರ್ವ ಕೆನರಾ ಹೈಸ್ಕೂಲ್‌ನ ಶಶಾಂಕ್‌ ಎಸ್‌., ಕೊಡಿಯಾಲ್‌ಬೈಲ್‌ ಸೈಂಟ್‌ ಅಲೋಶಿಯಸ್‌ ಶಾಲೆಯ ಸೊಹಾನ್‌ ಕೋಟ್ಯಾನ್‌ 622 ಅಂಕ ಗಳಿಸಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here