Friday 26th, April 2024
canara news

ವಸತಿಗೃಹದಲ್ಲಿ ಆತ್ಮಹತ್ಯೆ; ಕೊಲೆ ಶಂಕೆ ಮೂಡಿಸಿದ ಆತ್ಮಹತ್ಯೆ ದೃಶ್ಯ

Published On : 23 May 2016   |  Reported By : Canaranews Network


ಮಂಗಳೂರು: ಮಂಗಳೂರಿನ ವಸತಿ ಗೃಹವೊಂದರಲ್ಲಿ ವ್ಯಕ್ತಿಯೋರ್ವ ಕನ್ನಡಿ ಚೂರಿನಿಂದ ಕತ್ತನ್ನು ಸೀಳಿಕೊಂಡ ಆತ್ಮಹತ್ಯೆಗೈದ ಭೀಕರ ಘಟನೆ ಆದಿತ್ಯವಾರ ಬೆಳಕಿಗೆ ಬಂದಿದೆ. ಮಂಗಳೂರಿನ ಕೆ.ಎಸ್.ರಾವ್ ರಸ್ತೆಯಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೈದ ವ್ಯಕ್ತಿಯನ್ನು ಶಂಭು ಜಿ.ಎಸ್ ಎಂದು ಗುರುತಿಸಲಾಗಿದೆ. ಕಳೆದೆರಡು ದಿನಗಳಿಂದ ವಸತಿಗೃಹಕ್ಕೆ ಬಂದು ತಂಗಿದ್ದ ಶಂಭು ದಾವಣಗೆರೆಯ ವಿಳಾಸ ನೀಡಿದ್ದ ಎಂದು ವಸತಿಗೃಹದ ಮ್ಯಾನೇಜರ್ ಪೊಲೀಸರಿಗೆ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಹೊರಗೆ ಹೋಗಿ ಬಂದಾತ ಮತ್ತೆ ಹೊರಗೆ ಹೋಗದೆ ಇದ್ದ ಬಗ್ಗೆ ಸಂಶಯಗೊಂಡ ಇವರು ಉತ್ತರ ಠಾಣೆಗೆ ದೂರು ನೀಡಿದಾಗ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೋಣೆಯ ಬಾಗಿಲನ್ನು ಮುರಿದು ನೋಡಿದಾಗ ರಕ್ತದ ಮಡುವಿನಲ್ಲಿ ಶವ ಬಿದ್ದಿರುವುದು ಕಂಡು ಬಂದಿದೆ. ಮೃತದೇಹ ನೋಡಿದಾಗ ಇದು ಕೊಲೆಯೆಂದು ಶಂಕಿಸಲಾಗಿತ್ತು. ಬಳಿಕ ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಕೂಲಂಕುಷವಾಗಿ ಪರಿಶೀಲಿಸಿದಾಗ ಇದು ಆತ್ಮಹತ್ಯೆಯೆಂದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here