ಮಂಗಳೂರು: ಎತ್ತಿನ ಹೊಳೆ ಯೋಜನೆ ವಿರೋಧಿಸಿ ಮೇ 19ರಂದು ದಕ್ಷಿಣ ಕನ್ನಡ ಜಿಲ್ಲೆಯ ಜನರು ಸ್ವಯಂಪ್ರೇರಿತ ಬಂದ್ ನಡೆಸುವ ಮೂಲಕ ಮುಖ್ಯಮಂತ್ರಿಗೆ ತಕ್ಕ ಉತ್ತರ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನಾದರೂ ಈ ಯೋಜನೆ ನಿಲ್ಲಿಸುವ ಧೈರ್ಯ ತೋರಬೇಕು. ಇಲ್ಲದಿದ್ದರೆ ಜನರು ಅವರಿಗೆ ಖಂಡಿತ ಪಾಠ ಕಲಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಸಲಹೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜನರು ನಡೆಸಿದ ಅಭೂತ ಪೂರ್ವವಾದ ಸ್ವಯಂ ಪ್ರೇರಿತ ಜಿಲ್ಲಾ ಬಂದ್ ದೇಶಕ್ಕೇ ಮಾದರಿಯಾಗಿದೆ. ಇಂತಹ ಬಂದ್ ಈ ಹಿಂದೆಂದೂ ದೇಶದಲ್ಲಿ ನಡೆದಿಲ್ಲ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.