ಮಂಗಳೂರು: ಸುಮಾರು ೧೨ ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಸರ್ಕಾರದ ಮೂರು ವರ್ಷದ ಸಾಧನೆ ಕುರಿತ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಚುನಾವಣಾ ಪ್ರಣಾಳಿಕೆಯಂತೆ ನುಡಿದಂತೆ ನಡೆಯುತ್ತಿರುವ ರಾಜ್ಯ ಸರ್ಕಾರ ಶೇ.೧೦೦ಕ್ಕೂ ೯೦ ಆಶ್ವಾಸನೆಗಳನ್ನು ಪೂರೈಸಿದೆ. ಜಿಲ್ಲೆಯಲ್ಲಿ ಹೊಸದಾಗಿ ೧೪.೦೨೬ ಬಿಪಿಎಲ್ ಹಾಗೂ ೬.೬೬೫ ಎಪಿಎಲ್ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ.