ಮಂಗಳೂರು: ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ರಾಜಕಾರಣಿ ಜನಾರ್ದನ ಪೂಜಾರಿ ಅವರು ಪಕ್ಷದ ಸೂಚನೆ, ನಿಯಮಗಳನ್ನು ಮೀರಿ ತಮ್ಮ ಪಕ್ಷದ ಸರಕಾರದ ಕುರಿತೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ತಾವು ಪ್ರತಿನಿಧಿಸುವ ಕಾಂಗ್ರೆಸ್ ಪಕ್ಷವನ್ನು ದೂರುವ ಮೂಲಕ ವಿಪಕ್ಷ ಬಿಜೆಪಿಗೆ ಲಾಭ ಮಾಡಿಕೊಡುತ್ತಿರುವ ಅವರ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಭ್ರಮನಿರಸನಗೊಂಡಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಡಿಸಬೇಕು ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಎ. ಹೇಮನಾಥ ಶೆಟ್ಟಿ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ದೇಶದ ವಿತ್ತ ಸಚಿವರಾಗಿದ್ದವರು, ಇಂದಿರಾ ಗಾಂಧಿ ಅವರ ಸರಕಾರದಲ್ಲಿ ಕೆಲಸ ಮಾಡಿದ ಅನುಭವಿಯಾದ ಪೂಜಾರಿಯವರು ಈ ರೀತಿ ಅಸಂಬದ್ಧವಾಗಿ ಮಾತಧಿನಾಡುತ್ತಿದ್ದರೂ ಹೈಕಮಾಂಡ್ ಮೌನ ವಹಿಸಿರುವುದು ವಿಶೇಷವಾಗಿ ಕಾಣಿಸುತ್ತಿದೆ ಎಂದರು.
ಅಭಿವೃದ್ಧಿಯ ಸಮೀಕ್ಷೆಯಲ್ಲಿ ಕರ್ನಾಟಕ ರಾಜ್ಯ ದೇಶಕ್ಕೇ 2ನೇ ಸ್ಥಾನ ಪಡೆದಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಉತ್ತಮ ಆಡಳಿತ ನೀಡುವ ಮೂಲಕ ಜನಪ್ರಿಯ ಸರಕಾರವಾಗಿ ಮೂಡಿಬಂದಿದೆ. ವಿಪಕ್ಷದವರೂ ಮನಸ್ಸಿಧಿನಲ್ಲೇ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕ ಅಸಂಬದ್ಧವಾಗಿ ಮಾತನಾಡುವ ಮೂಲಕ ಕಾರ್ಯಕರ್ತರಿಗೆ, ನಾಯಕರಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.