ಮಂಗಳೂರು: ಎತ್ತಿನಹೊಳೆ ಯೋಜನೆಯ ರೂವಾರಿಗಳಾದ ಡಿ.ವಿ. ಸದಾನಂದ ಗೌಡ ಹಾಗೂ ವೀರಪ್ಪ ಮೊಲಿ ಅವರು ಜೂ. 11ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದು, ಅವರಿಗೆ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಕರಿಪತಾಕೆ ಪ್ರದರ್ಶಿಸಲಾಗುವುದು ಎಂದು ಸಂಯುಕ್ತ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.2018ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ವೀರಪ್ಪ ಮೊಲಿ ಹೇಳಿಕೆ ನೀಡುತ್ತಾರೆ.
ಆದರೆ ಈತನಕ ಯಾವುದೇ ಯೋಜನೆ ಹೇಳಿದ ಸಮಯಕ್ಕೆ ಮುಗಿದ ಉದಾಹರಣೆ ಇಲ್ಲ. ಅವರು ಇಂತಹ ಹೇಳಿಕೆ ಮೂಲಕ ಹೋರಾಟಕ್ಕೆ ಸವಾಲು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಕಾನೂನು ರೀತಿಯ ಹೋರಾಟಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ವಿಜಯ ಕುಮಾರ್ ಶೆಟ್ಟಿ ಆರೋಪಿಸಿದರು.