ಮಂಗಳೂರು: ಮಾರುತಿ ಓಮ್ನಿ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೋಡಾಜೆಯಲ್ಲಿ ಸಂಭವಿಸಿದೆ.ವರದಿಗಳ ಪ್ರಕಾರ ಪುತ್ತೂರಿನ ಸಂಜೀವ ಶೆಟ್ಟಿ ಜವಳಿ ಮಳಿಗೆಯ ಹತ್ತು ಮಂದಿ ಉದ್ಯೋಗಿಗಳನ್ನು ಹೊತ್ತ ಮಾರುತಿ ಒಮ್ನಿ ಪಣೋಲಿಬೈಲ್ಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಮಂಗಳೂರಿನಿಂದ ಪುತ್ತೂರಿನ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಒಮ್ನಿ ಅಪ್ಪಚ್ಚಿಯಾಗಿದ್ದು ಮೂವರು ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದಾರೆ.
ಉಳಿದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಘಟನೆ ಕುರಿತಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.