ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಚಿನ್ನಾಭರಣ ಮಳಿಗೆಯಿಂದ ಚಿನ್ನ ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅಮರಪುರ ಎಂಬಲ್ಲಿ ಬಂಧಿಸಿದ್ದು,ಬಂಧಿತನಿಂದ ೫ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ನಿಗೂಢವಾಗಿ ನಡೆದ ಈ ಪ್ರಕರಣವನ್ನು ಬೇಧಿಸಿದ ಪೊಲೀಸರ ಕಾರ್ಯದಕ್ಷತೆಯನ್ನು ಪ್ರಶಂಸಿದ ಪೊಲೀಸ್ ಉನ್ನತ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿದ್ದಾರೆ. ಬಿ.ಸಿ.ರೋಡಿನ ಅಪೂರ್ವ ಜುವೆಲ್ಲರ್ಸ್ ನಲ್ಲಿ ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಅಮರಪುರ ಮೂಲದ ಕಾನಕುಲ್ ನಿವಾಸಿ ಪಿಂಟೋರಾವತ್ ಬಂಧಿತ ಆರೋಪಿ. ಜೂ.೬ರಂದು ಈ ಕಳ್ಳತನ ನಡೆದಿದ್ದು, ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.