ಮಂಗಳೂರು: RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ ಸಂಬಂಧ ಬಂಧಿತ ಪ್ರಮುಖ ಆರೋಪಿ ನಮೋ ಬ್ರಿಗೇಡ್ ಸ್ಥಾಪಕ ನರೇಶ್ ಶೆಣೈನನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಮಂಗಳೂರಿನ ಎರಡನೇ ಜೆಎಂಎಫ್ಸಿ ಕೋರ್ಟ್ಗೆ ನರೇಶ್ನನ್ನು ಸೋಮವಾರ ಪೊಲೀಸರು ಹಾಜರುಪಡಿಸಿದ್ದರು.
ಈ ವೇಳೆ ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ, ಜೂನ್ 30ರಂದು ಕೋರ್ಟ್ಗೆ ಮತ್ತೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿತು.ಬಾಳಿಗಾ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಬಂಧಿಸಿರುವ ಕುರಿತು ಆದಿತ್ಯವಾರವಷ್ಟೆ ಪೊಲೀಸರು ಮಾಹಿತಿ ನೀಡಿದ್ದರು.