ಮಂಗಳೂರು: ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನರೇಶ್ ಶೆಣೈನನ್ನು ಮಂಗಳೂರಿನ ಜಿಲ್ಲಾ ೩ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನ್ಯಾಯಾಲಯವು ಶೆಣೈಗೆ ಜುಲೈ ೧೧ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಮಾ.೨೧ರಂದು ಆರ್ ಟಿ ಐ ಕಾರ್ಯಕರ್ತ ವಿನಾಯಕ್ ಬಾಳಿಗ ಅವರನ್ನು ಮಂಗಳೂರಿನ ಪಿವಿಎಸ್ ಕಲಾಕುಂಜದ ಬಳಿ ಹತ್ಯೆಗೈಯಲ್ಲಾಗಿತ್ತು. ಘಟನೆ ಬಳಿಕ ಆರೋಪಿ ನರೇಶ್ ಶೆಣೈ ೯೨ ದಿನಗಳ ಕಾಲ ತಲೆ ಮರೆಸಿಕೊಂಡಿದ್ದನು.
ಬಂಧನದ ಬಳಿಕ ನರೇಶ್ ಶೆಣೈಯನ್ನು ಜೂನ್ ೨೭ರಂದು ಮಂಗಳೂರಿನ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು,ಅಂದು ೩ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಅ ಬಳಿಕ ಶನಿವಾರ ಮತ್ತೆ ಬರ್ಕೆ ಪೊಲೀಸರು ಶೆಣೈ ನನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಗೆ ಜುಲೈ ೧೧ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.