ಮಂಗಳೂರು: ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಸೂಟ್ ಕೇಸ್ ತೆಗೆದುಕೊಳ್ಳುವಂತಹ ವ್ಯಕ್ತಿಯಲ್ಲ. ಅವರು ಮಧ್ಯಪ್ರದೇಶದ ರಾಜ ವಂಶಸ್ಥರು ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸೂಟ್ ಕೇಸ್ ಸಂಸ್ಕೃತಿ ನಿಲ್ಲಬೇಕೆಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ಪೂಜಾರಿ ತಿರುಗೇಟು ನೀಡಿದ್ದಾರೆ.
ದಿಗ್ವಿಜಯ್ ಸಿಂಗ್ ರಾಜ ವಂಶಸ್ಥರಾಗಿದ್ದವರು.ಬೇಕಾದಷ್ಟು ಸಂಪತ್ತು ಇದೆ. ಅವರಿಗೆ ಅಂತಹ ಸೂಟ್ ಕೇಸ್ ಅಗತ್ಯವಿಲ್ಲ ಎಂದು ಹೇಳಿದರು. ಇನ್ನು, ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಬಡವರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅವರು ಬಡವರ ಪರ ಕಮಿಟ್ ಮೆಂಟ್ ಹೊಂದಿದ್ದಾರೆ. ಇಂತಹ ವ್ಯಕ್ತಿಯ ನೇತೃತ್ವದಲ್ಲಿ ಕಾಂಗ್ರೆಸ್ ಇದೆ ಎಂದು ಹೇಳಿದರು.